'ಡಿಕೆಶಿಗೆ ಮತ್ತೆ ನೋಟೀಸಿನ ಹಿಂದೆ ದುರುದ್ದೇಶ ಇದೆ'
ನವದೆಹಲಿ 16, ಈಗಾಗಲೇ ಸ್ಪಷ್ಟೀಕರಣ ನೀಡಿದ್ದರೂ ಜಾರಿ ನಿದರ್ೆಶನಾಲಯ (ಇಡಿ) ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೆ ನೋಟಿಸ್ ನೀಡಿರುವುದರ ಹಿಂದೆ ದುರುದ್ದೇಶವಿದೆ ಎಂದು ಸಂಸದ ವಿ.ಎಸ್.ಉಗ್ರಪ್ಪ ಆರೋಪಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಡಿ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಿ ನಮ್ಮದೇನು ಅಭ್ಯಂತರವಿಲ್ಲ. ಅವರು ನೀಡಿದ ನೋಟಿಸ್ಗೆ ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ಉತ್ತರ ನೀಡಿದ್ದಾರೆ. ಮತ್ತೆ ನೋಟಿಸ್ ನೀಡಿ ತ್ವರಿತವಾಗಿ ಸ್ಪಷ್ಟೀಕರಣ ನೀಡಿ ಎಂದು ಹೇಳಿರುವುದರ ಹಿಂದೆ ದುರುದ್ದೇಶವಿದೆ. ಕೇಂದ್ರ ಸಕರ್ಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಜನರ ಭಾವನೆಗಳ ಜತೆ ಚೆಲ್ಲಾಟವಾಡುತ್ತಿದೆ ಎಂದ ಅವರು ತಿಳಿಸಿದರು.
ರಾಜ್ಯದ ಉಪಚುನಾವಣೆ ಫಲಿತಾಂಶದಿಂದ ಬಿಜೆಪಿ ಹತಾಶೆಯಾಗಿದೆ. ಬಳ್ಳಾರಿಯಲ್ಲಿ ಎರಡೂವರೆ ಲಕ್ಷ ಅಧಿಕ ಮತಗಳಿಂದ ನಾನು ಜಯಗಳಿಸಿದ್ದೇನೆ. ಯಡಿಯೂರಪ್ಪನವರು ನಾಲ್ಕು ಲಕ್ಷ ಮತಗಳಿಂದ ಗೆದಿದ್ದರು. ಈಗ ಅವರ ಪುತ್ರನ ಗೆಲುವಿನ ಅಂತರ 50ಸಾವಿರಕ್ಕಿಳಿದಿದೆ. ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಅವರು ಹೇಳಿದರು.
ದ್ವೇಷದ ರಾಜಕಾರಣದಿಂದ ಒಳ್ಳೆಯ ಹೆಸರು ಬರುವುದಿಲ್ಲ. ಅಪರಾಧವೆಸಗಿದ್ದರೆ ಕಾನೂನಿನ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಿ ಎಂದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 