ರಾಮಮಂದಿರ: ವಿಎಚ್ಪಿಯಿಂದ ಮತ್ತೊಂದು ಮಹತ್ವದ ಹೆಜ್ಜೆ
ಲಕ್ನೋ, ನ.29- ಅಯೋಧ್ಯೆಯಲ್ಲಿ ರಾಮಮಂದಿರ ನಿಮರ್ಾಣಕ್ಕಾಗಿ ಬೃಹತ್ ಧರ್ಮ ಸಭೆ ನಡೆಸಿ ಹಿಂದೂಗಳ ಶಕ್ತಿ ಪ್ರದಶರ್ಿಸಿದ್ದ ವಿಶ್ವ ಹಿಂದೂ ಪರಿಷತ್(ವಿಎಚ್ಪಿ) ಈಗ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಇನ್ನೂ ಒಂದು ಮಹತ್ವದ ಹೆಜ್ಜೆ ಇರಿಸಿದೆ. ಅಯೋಧ್ಯೆಯಲ್ಲಿ ಶತಾಯ-ಗತಾಯ ರಾಮಮಂದಿರ ನಿಮರ್ಾಣಕ್ಕಾಗಿ ಜನರು ಪ್ರತಿಜ್ಞಾ ವಿಧಿ ಸ್ವೀಕರಿಸಲು ತಾನು ದೇಶಾದ್ಯಂತ ಕಾರ್ಯಕ್ರಮಗಳನ್ನು ಆಯೋಜಿಸುವುದಾಗಿ ಇಂದು ಘೋಷಿಸಿದೆ. ಡಿ.18 ಗೀತ ಜಯಂತಿ ದಿನದಂದು ಈ ಕಾರ್ಯಕ್ರಮ ಆರಂಭವಾಗಲಿದ್ದು, ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮಗಳನ್ನು ದೇಶಾದ್ಯಂತ ಒಂದು ವಾರ ನಡೆಸಲಾಗುವುದು ಎಂದು ವಿಎಚ್ಪಿಯ ಅವಧ್ ಪ್ರಾಂತ್ಯದ ಸಂಘಟನಾ ಕಾರ್ಯದಶರ್ಿ ಭೋಲೇಂದ್ರ ಹೇಳಿದ್ದಾರೆ. ಸುದ್ದಿಸಂಸ್ಥೆಯೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಈ ಬಗ್ಗೆ ವಿವರ ನೀಡಿದ ಅವರು, ದೇಶಾದ್ಯಂತ ಪ್ರತಿಜ್ಞಾ ಸ್ವೀಕಾರ ಸಮಾರಂಭಗಳನ್ನು ನಡೆಸುವ ಜೊತೆಗೆ ವಿವಿಧ ಭಾಗಗಳಲ್ಲಿ ಪುಟ್ಟ ಧರ್ಮ ಸಭೆಗಳು(ಹೂಂಕಾರ ಸಮಾವೇಶ) ಸಹ ನಡೆಯಲಿವೆ ಅಯೋಧ್ಯೆಯಲ್ಲಿ ರಾಮಮಂದಿರ ನಿಮರ್ಾಣಕ್ಕಾಗಿ ಇವುಗಳ ಮೂಲಕ ನಮ್ಮ ಹೋರಾಟ ಮತ್ತಷ್ಟು ತೀವ್ರವಾಗಲಿವೆ ಎಂದು ತಿಳಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 