ಗುಣಮಟ್ಟದ ಕಾಮಗಾರಿ ಮಾಡಲು ಅಧಿಕಾರಿಗಳಿಗೆ ಡಿಸಿ ಸೂಚನೆ
ಲೋಕದರ್ಶನ ವರದಿ
ಬೆಳಗಾವಿ : ಕಾಮಗಾರಿ ವಿವರಗಳನ್ನೊಳಗೊಂಡ ಫಲಕಗಳನ್ನು ಕಡ್ಡಾಯವಾಗಿ ಹಾಕಿ, ಗುಣಮಟ್ಟದ ಕಾಮಗಾರಿ ಮಾಡಿ ಅಲ್ಲದೇ ಅಪೂರ್ಣ ಹಾಗೂ ಇನ್ನು ಆರಂಭವಾಗದ ಕಾಮಗಾರಿಗಳನ್ನು ಒಂದು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಜಿಯಾವುಲ್ಲಾ ಎಸ್, ಅವರು ಅಧಿಕಾಗಳಿಗೆ ಇಂದಿಲ್ಲಿ ಸೂಚನೆ ನೀಡಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲೆಯ 18 ವಿಧಾನ ಸಭೆ ಮತಕ್ಷೇತ್ರಗಳ ಅಲ್ಪ ಸಂಖ್ಯಾತರ ಕಾಲಿನಿಯ ಸಿಸಿ ರಸ್ತೆ ಕಾಮಗಾರಿ ಸಾರ್ವಜನಿಕ ಶೌಚಾಲಯ ಕಾಮಗಾರಿಗಳ ಪ್ರಗತಿ ಪರಿಶೀಲನೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಸುಮಾರು 50 ಸಾವಿರ ರೂ ವೆಚ್ಚದ ಕಾಮಗಾರಿಗಳು ಇನ್ನು ಕೆಲವು ಕಡೆ ಆರಂಭವಾಗಿಯೇ ಆಗಿಲ್ಲ. ಅಧಿಕಾರಿಗಳು ಶೀಘ್ರ ಕಾಮಗಾರಿ ಆರಂಭಿಸಿ ಒಂದು ತಿಂಗಳಲ್ಲಿ ಮುಗಿಸಬೇಕೆಂದು ಸೂಚನೆ ನೀಡಿದರು.
ಜಿಲ್ಲೆಯ ಕೆಲವು ಕಡೆ ಪೈಪಲೇನ್ ಕಾಮಗಾರಿ ಸಂಬಂಧ ಕಾಮಗಾರಿಗಳು ವಿಳಂಭವಾಗಿವೆ ಎಂದು ಅಧಿಕಾರಿಗಳು ತಿಳಿಸಿದರು. ಕೆಲವು ಕಡೆ ಅರ್ಧದಷ್ಟು ಕಾಮಗಾರಿಗಳು ಮುಗಿದಿದ್ದರೂ ಬಹಳಷ್ಟು ಕಡೆ ಕಾಮಗಾರಿಗಳು ಆರಂಭವಾಗಿಲ್ಲ. ಅಧಿಕಾರಿಗಳು ಸಬೂಬು ಹೇಳದೇ ಕೆಲಸ ಮಾಡಬೇಕೆಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಕೆಲವು ಕ್ಷೇತ್ರಗಳಲ್ಲಿ ಹೊಸ ಶಾಸಕರು ಬಂದಿದ್ದು, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಕೆಲ ಅಧಿಕಾರಿಗಳು ಕಾಮಗಾರಿಗಳಲ್ಲಿ ಬದಲಾವಣೆ ಕೇಳುತ್ತಿರುವ ಬಗ್ಗೆ ಸಭೆಯಲ್ಲಿ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಮಚಂದ್ರನ್ ಆರ್, ಅವರು ಉಪಸ್ಥಿತರಿದ್ದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 