ಇಂದು ಬೆಳಗಾವಿಗೆ ಪ್ರಮುಖಸಾಗರ ಶ್ರೀಗಳುtoday
ಬೆಳಗಾವಿ 3: ಜೈನ ಮುನಿ ಪ್ರಮುಖಸಾಗರಜೀ ಮುನಿಗಳು ಬುಧವಾರ ಜುಲೈ 4 ರಂದು ಬೆಳಿಗ್ಗೆ 8 ಗಂಟೆಗೆ ಬೆಳಗಾವಿ ನಗರ ಪ್ರವೇಶ ಮಾಡಲಿದ್ದಾರೆ. ಅಂದು ಬೆಳಿಗ್ಗೆ 8 ಗಂಟೆಗೆ ಕೋಟೆ ಆವರಣದ ಬಳಿಯಿರುವ ಭರತೇಶ ಶಿಕ್ಷಣ ಸಂಸ್ಥೆಯ ಹತ್ತಿರ ಶ್ರೀಗಳನ್ನು ಜೈನ ಸಮಾಜದ ವತಿಯಿಂದ ಸ್ವಾಗತ ಕೋರಲಾಗುವುದು. ಶ್ರಿಗಳು ಮುಂದಿನ ಐದು ದಿನಗಳ ವರೆಗೆ ಬೆಳಗಾವಿ ಮಠ ಬೀದಿಯ ಚಿಕ್ಕ ಬಸದಿಯಲ್ಲಿ ವಾಸ್ತವ್ಯ ಮಾಡಲಿದ್ದು ಈ ಐದು ದಿನಗಳ ಕಾಲ ಮಧ್ಯಾಹ್ನ 3 ಗಂಟೆಗೆ ಪ್ರವಚನ ನೀಡಲಿದ್ದಾರೆ. ಹಾಗಾಗಿ ಜೈನ ಸಮಾಜ ಬಾಂಧವರು ಈ ಎಲ್ಲ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಮಾಜದ ಮುಖಂಡರಾದ ರಾಜೀವ ದೊಡ್ಡಣ್ಣವರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 