“ಜಾಗೃತಿ ಮತ್ತು ಅನುಷ್ಠಾನ” ಕಾರ್ಯಕ್ರಮ
“Awareness and Implementation” Program
ಲೋಕದರ್ಶನ ವರದಿ
ಹಾವೇರಿ 13 : ಹಾವೇರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜನಲ್ಲಿ “ಋಖ: ಜಾಗೃತಿ ಮತ್ತು ಅನುಷ್ಠಾನ” ವಿಷಯದ ಮೇಲೆ ಒಂದು ದಿನದ ಕಾರ್ಯಕ್ರಮ ಶುಕ್ರವಾರ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಬೆಂಗಳೂರಿನ ಡೈರೆಕ್ಟರ್ ಡಾ. ಶ್ರೀನಿವಾಸರಾವ ಅವರು ಮಾತನಾಡಿ, ಬೌದ್ಧಿಕ ಸ್ವತ್ತಿನ ಹಕ್ಕುಗಳು ಪೇಟೆಂಟ್ ಸಲ್ಲಿಕೆ ಪ್ರಕ್ರಿಯೆ, ಅದರ ಮಹತ್ವ ಹಾಗೂ ಅನುಷ್ಠಾನದ ಕುರಿತು ವಿವರವಾಗಿ ಮಾಹಿತಿ ನೀಡಿದರು ಹಾಗೂ ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ಸಂಶೋಧನಾ ಆವಿಷ್ಕಾರಗಳನ್ನು ಪೇಟೆಂಟ್ ಮೂಲಕ ರಕ್ಷಿಸುವ ಅಗತ್ಯತೆಯನ್ನು ವಿವರಿಸಿದರು. ಪ್ರಾಂಶುಪಾಲ ಡಾ. ಮುನಿರಾಜು ಎಂ. ಅಧ್ಯಕ್ಷತೆ ವಹಿಸಿದ್ದರು. ಕಾರ್ಯಾಗಾರದ ಸಂಯೋಜಕರಾಗಿ ಡಾ. ಹರೀಶ್ ಎಚ್. ಎಂ. ಕಾರ್ಯನಿರ್ವಹಿಸಿದರು. ಈ ಕಾರ್ಯಾಗಾರದಲ್ಲಿ ಕಾಲೇಜಿನ ಎಲ್ಲಾ ವಿಭಾಗಗಳ ಮೂರನೇ ವರ್ಷದ ವಿದ್ಯಾರ್ಥಿಗಳು, ವಿವಿಧ ವಿಭಾಗಗಳ ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಭಾಗವಹಿಸಿ ಋಖ ಕುರಿತು ಮಹತ್ವದ ಮಾಹಿತಿ ಪಡೆದುಕೊಂಡರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 