ವಿ.ವಿ.ಯಲ್ಲಿ “ಬಯೋ ಇನೋವೇಷನ್ ಸೆಂಟರ್” ಉದ್ಘಾಟನೆ
“Bio Innovation Center” inaugurated at V.V.
ಲೋಕದರ್ಶನ ವರದಿ
ಬಳ್ಳಾರಿ 17: ಕಲ್ಯಾಣ ಕರ್ನಾಟಕದ ಭಾಗದಲ್ಲಿ ಹಲವಾರು ಯುವ ಸಂಶೋಧನಾ ವಿಜ್ಞಾನಿಗಳು ಮುಂಚೂಣಿಯಲ್ಲಿದ್ದು, ಅವರಿಗಾಗಿ ಮುಂದಿನ ದಿನಗಳಲ್ಲಿ ವಿವಿಯ ಕ್ಯಾಂಪಸ್ನಲ್ಲಿ ಬಯೋ ಇನ್ನೋವೇಷನ್ ಸೆಂಟರ್ ತೆರೆಯಲಾಗುವುದು ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ ಮುನಿರಾಜು ಅವರು ಹೇಳಿದರು. ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರೊ.ಸಿದ್ದು ಪಿ ಆಲಗೂರ ಸಭಾಂಗಣದಲ್ಲಿ ವಿಶ್ವವಿದ್ಯಾಲಯ ಮತ್ತು ಸೆಂಟರ್ ಫಾರ್ ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಆರ್ ಆ್ಯಂಡ್ ಡಿ ಕೋಶವು ಜಂಟಿಯಾಗಿ ಬುಧವಾರ ಆಯೋಜಿಸಿದ್ದ ‘ನ್ಯಾನೋ ಜಾಥಾ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬಯೋ ಇನ್ನೋವೇಷನ್ ಸೆಂಟರ್ ಆರಂಭದಿಂದ ಕಲ್ಯಾಣ ಕರ್ನಾಟಕ ಭಾಗದ ಯುವ ವಿಜ್ಞಾನಿಗಳಿಗಾಗಿ ನಮ್ಮ ವಿಶ್ವವಿದ್ಯಾಲಯವು ಉತ್ತಮ ವೇದಿಕೆಯಾಗಲಿದೆ ಎಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 