ವಿಜಯನಗರ ಜಿಲ್ಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ “ಕನ್ನಡ ರತ್ನ”
“Kannada Ratna” for SSLC students of Vijayanagar district
ಹರಪನಹಳ್ಳಿ 01: ಕನ್ನಡ ನಾಡು-ನುಡಿ ಬೆಳವಣಿಗೆ ಮತ್ತು ವಿದ್ಯಾರ್ಥಿಗಳಲ್ಲಿ ಕನ್ನಡದ ಅಭಿಮಾನ ಅರಿವು ಮೂಡಿಸಿ ಪ್ರೇರೇಪಿಸುವ ಉದ್ದೇಶದಿಂದ 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ-1ರಲ್ಲಿ ಉತ್ತೀರ್ಣರಾಗಿ ಕನ್ನಡ ಭಾಷಾ ವಿಷಯದಲ್ಲಿ 125 ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹರಪನಹಳ್ಳಿ ಪಟ್ಟಣದ ನವಜ್ಯೋತಿ ಸಾಂಸ್ಕೃತಿಕ ಸೇವಾ ಸಂಸ್ಥೆ ಪ್ರತಿ ವರ್ಷದಂತೆ ರಾಜ್ಯಮಟ್ಟದ “ಕನ್ನಡ ರತ್ನ” ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಿದೆ.
ಪ್ರಶಸ್ತಿಯಲ್ಲಿ ಕೀರೀಟ ಧಾರಣೆ ಮಾಡಿ, ಕನ್ನಡ ಶಾಲು, ನೆನಪಿನ ಕಾಣಿಕೆ, ಪ್ರಶಸ್ತಿ ಪತ್ರ, ಕನ್ನಡ ಪುಸ್ತಕ ನೀಡಿ ಗೌರವಿಸಲಾಗುವುದು. ಇದು ವಿಜಯನಗರ ಜಿಲ್ಲೆಯವರಿಗೆ ಮಾತ್ರ ಅವಕಾಶವಿದ್ದು, ಆಸಕ್ತ ವಿದ್ಯಾರ್ಥಿಗಳು ದಿನಾಂಕ 5-5-2025 ಸೋಮವಾರದಿಂದ 10-5-2025 ಶನಿವಾರದೊಳಗೆ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಅಂಕಪಟ್ಟಿ, ಆಧಾರ್ ಕಾರ್ಡ್, 2ಪೋಟೋಗಳೊಂದಿಗೆ ಹರಪನಹಳ್ಳಿ ಪಟ್ಟಣದ ಗ್ಯಾಸ್ ಏಜೆನ್ಸಿ, ಅಧಿಕಾರ್ ಆಸ್ಪತ್ರೆ ಹತ್ತಿರ ಇರುವ ನವಜ್ಯೋತಿ ಸೌಹಾರ್ದ ವಿವಿದೋದ್ದೇಶ ಸಹಕಾರಿಗೆ ಬಂದು ಅರ್ಜಿಪಡೆದು ಸಲ್ಲಿಸಲು ತಿಳಿಸಲಾಗಿದೆ. ಕಾರ್ಯಕ್ರಮ “ಬಸಮ್ಮ ಕಲಾಮಂದಿರ” ಗ್ಯಾಸ್ ಏಜೆನ್ಸಿ ಹತ್ತಿರ, ಹೊಸ ಬಸ್ಟ್ಯಾಂಡ್ ಸಮೀಪ, ಹರಪನಹಳ್ಳಿಯಲ್ಲಿ ನಡೆಯಲಿದ್ದು, ಪ್ರಶಸ್ತಿ ಪ್ರದಾನ ಮಾಡುವ ದಿನಾಂಕವನ್ನು ತಿಳಿಸಲಾಗುವುದು.
ಅರ್ಜಿಯನ್ನು ಕನ್ನಡದಲ್ಲಿಯೇ ತುಂಬತಕ್ಕದ್ದು, ಕನ್ನಡ ಅಂಕಿ-ಸಂಖ್ಯೆಗಳನ್ನೇ ಬಳಸತಕ್ಕದ್ದು. ರವಿವಾರ ಮತ್ತು ಸರ್ಕಾರಿ ರಜಾ ದಿನಗಳಲ್ಲಿ ಕಚೇರಿ ರಜೆ ಇರುತ್ತದೆ. ಮೇಲೆ ತಿಳಿಸಿದ ವಿಳಾಸದಲ್ಲಿ ನೇರವಾಗಿ ಬಂದು ಅರ್ಜಿ ಸಲ್ಲಿಸಬೇಕು. ಕೋರಿಯರ್, ಮೇಲ್, ಪೋಸ್ಟ್, ವಾಟ್ಸ್ ಆಪ್ನಲ್ಲಿ ಬಂದ ಅರ್ಜಿ ಸ್ವೀಕರಿಸುವುದಿಲ್ಲ ಎಂದು ನವಜ್ಯೋತಿ ಸಾಂಸ್ಕೃತಿಕ ಸೇವಾ ಸಂಸ್ಥೆಯ ಅಧ್ಯಕ್ಷರಾದ ಸಪ್ನ ಮಲ್ಲಿಕಾರ್ಜುನ ಮತ್ತು ಕನ್ನಡ ಉಪನ್ಯಾಸಕ ಹೆಚ್.ಮಲ್ಲಿಕಾರ್ಜುನ ತಿಳಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 